ನನ್ನ ಹೊಸ ಪುಸ್ತಕ 'ತಿನ್ನಲಾಗದ ಬಿಸ್ಕತ್ತು, ನುಂಗಲಾಗದ ಟ್ಯಾಬ್ಲೆಟ್ಟು' ಬರುವ ನವೆಂಬರ್ ೬ರ ಸಂಜೆ ಬೆಂಗಳೂರಿನಲ್ಲಿ ಬಿಡುಗಡೆಯಾಗಲಿದೆ. ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ನಿಮಗೆ ಆದರದ ಸ್ವಾಗತ. ಹಿರಿಯ ಭಾಷಾತಜ್ಞರಾದ ಪ್ರೊ. ಜಿ. ವೆಂಕಟಸುಬ್ಬಯ್ಯ ಹಾಗೂ ಖ್ಯಾತ ಚಲನಚಿತ್ರ ನಿರ್ದೇಶಕ ಶ್ರೀ ಗುರುಪ್ರಸಾದ್ ಅಂದು ನಮ್ಮೊಡನೆ ಇರಲಿದ್ದಾರೆ.
ಪುಸ್ತಕದ ಮುಂಗಡ ಬುಕಿಂಗ್ www.akrutibooks.com ತಾಣದಲ್ಲಿ ಪ್ರಾರಂಭವಾಗಿದೆ. ಬುಕಿಂಗ್ ದೃಢೀಕರಣ ಇಮೇಲ್ನ ಮುದ್ರಿತ ಪ್ರತಿ ತಂದು ಕಾರ್ಯಕ್ರಮದ ದಿನ ನಿಮ್ಮ ಪ್ರತಿಯನ್ನು ಪಡೆದುಕೊಳ್ಳಬಹುದು. ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗದವರ ಪ್ರತಿಗಳನ್ನು ಅಂಚೆ/ಕೊರಿಯರ್ ಮೂಲಕ ಕಳುಹಿಸಿಕೊಡಲಾಗುವುದು. ಅಂಚೆ ವೆಚ್ಚ ನಮ್ಮದೇ!
ಸರಳ ಶೈಲಿಯ ಬರೆವಣಿಗೆ ಜೊತೆಗೆ ಜಿ. ಎಸ್. ನಾಗನಾಥ್ ಅವರ ಕಾರ್ಟೂನುಗಳು ಈ ಪುಸ್ತಕವನ್ನು ಇನ್ನಷ್ಟು ಆಕರ್ಷಕಗೊಳಿಸಿವೆ.
ಟಿ. ಜಿ. ಶ್ರೀನಿಧಿ
ಐಫೋನ್ ೫ ಹೇಗಿರಬಹುದು, ಅದರಲ್ಲಿ ಆಪಲ್ ಏನೇನು ಹೊಸ ವೈಶಿಷ್ಟ್ಯಗಳನ್ನು ಸೇರಿಸಿರಬಹುದು ಎಂಬ ಪ್ರಶ್ನೆಗಳು ಎಲ್ಲ ದಿಕ್ಕುಗಳಿಂದಲೂ ಕೇಳಿಬಂದು ಸಾಕಷ್ಟು ಆಸಕ್ತಿ ಸೃಷ್ಟಿಯಾಗಿತ್ತು. ಸ್ಟೀವ್ ಜಾಬ್ಸ್ ನಿವೃತ್ತಿಯ ನಂತರ ಆಪಲ್ನ ನೇತೃತ್ವ ವಹಿಸಿಕೊಂಡಿರುವ ಟಿಮ್ ಕುಕ್ ಈ ಕಾರ್ಯಕ್ರಮವನ್ನು ಹೇಗೆ ನಡೆಸಿಕೊಡಬಹುದು ಎನ್ನುವ ಕುತೂಹಲವೂ ಇತ್ತು. ಕಾರ್ಯಕ್ರಮಕ್ಕೆ ಸ್ಟೀವ್ ಜಾಬ್ಸ್ ಬಂದರೂ ಬರಬಹುದು ಎಂಬ ವದಂತಿ ಬಿಬಿಸಿಯಲ್ಲೂ ಕಾಣಿಸಿಕೊಂಡಿತ್ತು!
ಆದರೆ ಕಾರ್ಯಕ್ರಮ ಶುರುವಾಗಿ ಸ್ವಲ್ಪಹೊತ್ತಿನಲ್ಲೇ ಕುತೂಹಲವೆಲ್ಲ ತಣ್ಣಗಾಗಿಹೋಯಿತು. ಏಕೆಂದರೆ ಅಲ್ಲಿ ಐಫೋನ್ ೫ರ ಸುದ್ದಿಯೇ ಇರಲಿಲ್ಲ!
ಅಕ್ಟೋಬರ್ ೧೧, ೨೦೧೧ರ ಉದಯವಾಣಿಯಲ್ಲಿ ಪ್ರಕಟವಾಗಿರುವ ಲೇಖನ, 'ವಿಜ್ಞಾಪನೆ' ಅಂಕಣದ ಐವತ್ತನೇ ಬರೆಹ. ಲೇಖನದ ಮುದ್ರಿತ ರೂಪಕ್ಕೆ ನೀಡಲಾಗಿರುವ ಶೀರ್ಷಿಕೆಗೆ ನನ್ನ ಸಹಮತವಿಲ್ಲ; ಹಾಗಾಗಿ ಅದರ ಚಿತ್ರವನ್ನು ಇಲ್ಲಿ ಪ್ರಕಟಿಸಿಲ್ಲ.ಕಳೆದ ವಾರದಲ್ಲಿ ಆಪಲ್ ಸಂಸ್ಥೆ ಸತತವಾಗಿ ಸುದ್ದಿಯಲ್ಲಿತ್ತು. ವಾರದ ಶುರುವಿನಲ್ಲಿ ಇದಕ್ಕೆ ಕಾರಣವಾದದ್ದು ಐಫೋನ್ ೫ರ ನಿರೀಕ್ಷೆ. ಕಳೆದ ಮಂಗಳವಾರದ "ಲೆಟ್ಸ್ ಟಾಕ್ ಐಫೋನ್" ಕಾರ್ಯಕ್ರಮದಲ್ಲಿ ಐಫೋನ್ನ ಈ ಹೊಸ ಅವತಾರದ ಪರಿಚಯವಾಗಬಹುದು ಎಂದು ಎಲ್ಲರೂ ಅಂದುಕೊಂಡಿದ್ದರು.
ಐಫೋನ್ ೫ ಹೇಗಿರಬಹುದು, ಅದರಲ್ಲಿ ಆಪಲ್ ಏನೇನು ಹೊಸ ವೈಶಿಷ್ಟ್ಯಗಳನ್ನು ಸೇರಿಸಿರಬಹುದು ಎಂಬ ಪ್ರಶ್ನೆಗಳು ಎಲ್ಲ ದಿಕ್ಕುಗಳಿಂದಲೂ ಕೇಳಿಬಂದು ಸಾಕಷ್ಟು ಆಸಕ್ತಿ ಸೃಷ್ಟಿಯಾಗಿತ್ತು. ಸ್ಟೀವ್ ಜಾಬ್ಸ್ ನಿವೃತ್ತಿಯ ನಂತರ ಆಪಲ್ನ ನೇತೃತ್ವ ವಹಿಸಿಕೊಂಡಿರುವ ಟಿಮ್ ಕುಕ್ ಈ ಕಾರ್ಯಕ್ರಮವನ್ನು ಹೇಗೆ ನಡೆಸಿಕೊಡಬಹುದು ಎನ್ನುವ ಕುತೂಹಲವೂ ಇತ್ತು. ಕಾರ್ಯಕ್ರಮಕ್ಕೆ ಸ್ಟೀವ್ ಜಾಬ್ಸ್ ಬಂದರೂ ಬರಬಹುದು ಎಂಬ ವದಂತಿ ಬಿಬಿಸಿಯಲ್ಲೂ ಕಾಣಿಸಿಕೊಂಡಿತ್ತು!
ಆದರೆ ಕಾರ್ಯಕ್ರಮ ಶುರುವಾಗಿ ಸ್ವಲ್ಪಹೊತ್ತಿನಲ್ಲೇ ಕುತೂಹಲವೆಲ್ಲ ತಣ್ಣಗಾಗಿಹೋಯಿತು. ಏಕೆಂದರೆ ಅಲ್ಲಿ ಐಫೋನ್ ೫ರ ಸುದ್ದಿಯೇ ಇರಲಿಲ್ಲ!
ಮೈಸೂರಿನ ಭಾರತೀ ಪ್ರಕಾಶನ ಹೊರತಂದಿರುವ ನನ್ನ ತಂದೆಯವರ ಕೃತಿ 'ಕನ್ನಡ ವ್ಯಾಕರಣ ಪ್ರವೇಶ'ದ ಏಳನೇ ಆವೃತ್ತಿ ಇದೀಗ ಮಾರುಕಟ್ಟೆಯಲ್ಲಿದೆ (ಬೆಲೆ ರೂ.೬೫/-). ಈ ಪುಸ್ತಕದ ಕುರಿತು ಬೇದ್ರೆ ಮಂಜುನಾಥರು ಹಿಂದೊಮ್ಮೆ ಬರೆದಿದ್ದ ಪರಿಚಯ ಇದೀಗ ಮತ್ತೊಮ್ಮೆ ನಿಮಗಾಗಿ.
ಇಜ್ಞಾನ ವಿದ್ಯುನ್ಮಾನ ಪತ್ರಿಕೆಯ 'ವಿಜ್ಞಾನ ಸಂವಹನ ಸಂಚಿಕೆ' ಇದೀಗ ಹೊರಬಂದಿದೆ. ಈ ಸಂಚಿಕೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಅಕ್ಟೋಬರ್ ೪, ೨೦೧೧ರ ಉದಯವಾಣಿಯಲ್ಲಿ ಪ್ರಕಟವಾದ ಲೇಖನ. ಲೇಖನದ ಶೀರ್ಷಿಕೆ, ಯಥಾಪ್ರಕಾರ, ಪತ್ರಿಕೆಯವರ ಕೊಡುಗೆ.
ಈ ಲೇಖನದ ಪಠ್ಯರೂಪ ಇಜ್ಞಾನ ಡಾಟ್ ಕಾಮ್ನಲ್ಲಿದೆ. ನೀವು ಫೇಸ್ಬುಕ್ನಲ್ಲಿ ಇಜ್ಞಾನದ ಪುಟ ಲೈಕ್ ಮಾಡಿದ್ದೀರಾ?